ಜೈ ಶ್ರೀ ಕೃಷ್ಣ🙏🏻
Вставка
- Опубліковано 8 лют 2025
- "ಓಂ ದೇವಕಿನಂದನಾಯ ವಿದ್ಮಹೇ ವಾಸುದೇವಯ್ಯ ಧೀಮಹಿ ತನ್ನೋ ಕೃಷ್ಣಃ ಪ್ರಚೋದಯಾತ್"....
ಶ್ರೀ ಕೃಷ್ಣನ ಈ ಮಂತ್ರವನ್ನು ಪಠಿಸುವುದರಿಂದ ವ್ಯಕ್ತಿಯ ಜೀವನದಿಂದ ಮತ್ತು ಮನಸ್ಸಿನಿಂದ ಎಲ್ಲಾ ದುಃಖಗಳು ದೂರವಾಗುತ್ತವೆ. ನೀವು ಯಾವುದಾದರೊಂದು ವಿಷಯದ ಬಗ್ಗೆ ಚಿಂತಿಸುತ್ತಿದ್ದರೆ, ಆ ಚಿಂತೆಯಿಂದ ಮುಕ್ತಿಯನ್ನು ಪಡೆಯುವುದಕ್ಕಾಗಿ ಮುಂಜಾನೆ ಮತ್ತು ಸಂಜೆ ಈ ಮಂತ್ರವನ್ನು 108 ಬಾರಿ ಜಪಿಸಿ.
ಕೃಷ್ಣ ಏನಬಾರದೆ | ಕೃಷ್ಣನ ನೆನೆದರೆ ಕಷ್ಟ ಒಂದಿಷ್ಟಿಲ್ಲ ||ಪ||
ನರಜನ್ಮ ಬಂದಾಗ ನಾಲಿಗೆ ಇರುವಾಗ ಕೃಷ್ಣ ಎನಬಾರದೆ ||ಅ|| ಮಲಗಿದ್ದು ಮೈಮುರಿದು ಏಳುತಲೊಮ್ಮೆ ಕೃಷ್ಣ ಎನಬಾರದೆ ||ನಿತ್ಯ ||
ಸುಳಿದಾಡುತ ಮನೆಯೊಳಗಾದರು ಒಮ್ಮೆ ಕೃಷ್ಣ ಎನಬಾರದೆ ||೧|| ಮೇರೆ ತಪ್ಪಿ ಮಾತಾಡುವಾಗಲೊಮ್ಮೆ | ಕೃಷ್ಣಎನಬಾರದೆ || ದೊಡ್ಡ ||
ದಾರಿಯ ನಡೆದಾಗ ಭಾರವ ಹೊರುವಾಗ ಕೃಷ್ಣ ಎನಬಾರದೆ ||೨||
ಗಂಧವ ಪೂಸಿ ತಾಂಬೂಲವ ಮೆಲುವಾಗ | ಕೃಷ್ಣ ಎನಬಾರದೆ ತನ್ನ | ಮಂದಗಮನೆ ಕೂಡ ಸರಸವಾಡುತಲೊಮ್ಮೆ ಕೃಷ್ಣಎನಬಾರದೆ ||೩||
ಪರಿಹಾಸ್ಯದ ಮಾತಾಡುತಲೊಮ್ಮೆ | ಕೃಷ್ಣ ಏನಬಾರದೆ | ಪರಿ ಪರಿ ಕೆಲಸದೊಳೊಂದು ಕೆಲಸವೆಂದು | ಕೃಷ್ಣ ಏನಬಾರದೆ ||೪||
ಕಂದನ ಬಿಗಿದಪ್ಪಿ ಮುದ್ದಾಡುತಲೊಮ್ಮೆ ಕೃಷ್ಣ ಎನಬಾರದೆ || ಬಹು || ಚಂದುಳ್ಳ ಹಾಸಿಗೆ ಮೇಲೆ ಕುಳಿತೊಮ್ಮೆ ಕೃಷ್ಣ ಎನಬಾರದೆ ||೫||
ನೀಗದಾಲೋಚನೆ ರೋಗೋಪದ್ರವದಲೊಮ್ಮೆ | ಕೃಷ್ಣ ಎನಬಾರದೆ || ಒಳ್ಳೆ ಭೋಗ ಪಡೆದು ಅನುರಾಗದಿಂದಿರುವಾಗ | ಕೃಷ್ಣ ಎನಬಾರದೆ ||೬||
ದುರಿತರಾಶಿಗಳನು ತಂದು ಬಿಸುಡಲು ಕೃಷ್ಣ ಎನಬಾರದೆ | ಸದಾ || ಗರುಡವಾಹನ ಸಿರಿಪುರಂದರ ವಿಠಲನ್ನೇ | ಕೃಷ್ಣ ಎನಬಾರದೆ ||೭||
ಕೃಷ್ಣ ಎನಬರದೆ | ಕೃಷ್ಣನ ನೆನೆದರೆ ಕಷ್ಟ ಒಂದಿಷ್ಟಿಲ್ಲ ||ಪ||
Jai shri Krishna 🙏🙏🙏
Jai Shri Krishna 🙏🏻🙏🏻🙏🏻