ಹರಿ ಕಥಾಮೃತ ಸಾರ | Hari Kathamruta Saara | Sri Ananth Kulkarni | Haridasa Habba 2014
Вставка
- Опубліковано 30 лис 2020
- Vocals: Sri. Ananth Kulkarni
Harmonium: Sri. Ravindra Katoti
Tabla: Sri. Rajagopala Kallurkar
Tabla: Sri. Roopak Kallurkar
Taala: Sri. Venkatesh Purohit
Taala: Sri. Amit
Support Vocals: Sri Shashi Kumar
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ
ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು||
ಶ್ರೀರಮಣಿ ಕರಕಮಲ ಪೂಜಿತ ಚಾರುಚರಣ ಸರೋಜ
ಬ್ರಹ್ಮ ಸಮೀರವಾಣಿ ಫಣೀಂದ್ರವೀಂದ್ರ ಭವ ಇಂದ್ರ ಮುಖ ವಿನುತ
ನೀರಜಭವಾಂಡ ಉದಯ ಸ್ಥಿತಿ ಕಾರಣನೆ ಕೈವಲ್ಯದಾಯಕ
ನಾರಸಿಂಹನೆ ನಮಿಪೆ ಕರುಣಿಪುದು ಎಮಗೆ ಮಂಗಳವ||1||
ಜಗದುದರನ ಅತಿ ವಿಮಲ ಗುಣರೂಪಗಳನು ಆಲೋಚನದಿ
ಭಾರತ ನಿಗಮತತಿಗಳ ಅತಿಕ್ರಮಿಸಿ ಕ್ರಿಯಾ ವಿಶೇಷಗಳ
ಬಗೆಬಗೆಯ ನೂತನವ ಕಾಣುತ ಮಿಗೆ ಹರುಷದಿಂ ಪೊಗಳಿ ಹಿಗ್ಗುವ
ತ್ರಿಗುಣಮಾನಿ ಮಹಾಲಕುಮಿ ಸಂತೈಸಲಿ ಅನುದಿನವು||2||
ನಿರುಪಮಾನಂದಾತ್ಮ ಭವ ನಿರ್ಜರ ಸಭಾಸಂಸೇವ್ಯ
ಋಜುಗಣದ ಅರಸೆ ಸತ್ವಪ್ರಚುರ ವಾಣೀಮುಖಸರೋಜೇನ
ಗರುಡ ಶೇಷ ಶಶಾಂಕದಳ ಶೇಖರರ ಜನಕ ಜಗದ್ಗುರುವೇ
ತ್ವಚ್ಚರಣಗಳಿಗೆ ಅಭಿವಂದಿಸುವೆ ಪಾಲಿಪುದು ಸನ್ಮತಿಯ||3||
Advertisements
REPORT THIS AD
ಆರುಮೂರೆರೆಡೊoದು ಸಾವಿರ ಮೂರೆರೆಡು ಶತಶ್ವಾಸ ಜಪಗಳ
ಮೂರು ವಿಧ ಜೀವರೊಳಗೆ ಅಬ್ಜಜಕಲ್ಪ ಪರಿಯಂತ ತಾ ರಚಿಸಿ
ಸತ್ವರಿಗೆ ಸುಖ ಸಂಸಾರ ಮಿಶ್ರರಿಗೆ ಅಧಮಜನರಿಗೆ
ಅಪಾರ ದುಃಖಗಳ ಈವ ಗುರು ಪವಮಾನ ಸಲಹೆಮ್ಮ||4||
ಚತುರವದನನ ರಾಣಿ ಅತಿರೋಹಿತ ವಿಮಲಾ ವಿಜ್ಞಾನಿ
ನಿಗಮ ಪ್ರತತಿಗಳಿಗಭಿಮಾನಿ ವೀಣಾಪಾಣಿ ಬ್ರಹ್ಮಾಣಿ
ನತಿಸಿ ಬೇಡುವೆ ಜನನಿ ಲಕ್ಷ್ಮೀಪತಿಯ ಗುಣಗಳ ತುತಿಪುದಕೆ
ಸನ್ಮತಿಯ ಪಾಲಿಸಿ ನೆಲೆಸು ನೀ ಮದ್ವದನ ಸದನದಲಿ||5||
ಕೃತಿರಮಣ ಪ್ರದ್ಯುಮ್ನನಂದನೆ ಚತುರವಿಂಶತಿ
ದೇವತೆಗಳಿಗೆ ಗುರುವೆನಿಸುತಿಹ ಮಾರುತನ ನಿಜಪತ್ನಿ
ಸತತ ಹರಿಯಲಿ ಗುರುಗಳಲಿ ಸದ್ಗತಿಯ ಪಾಲಿಸಿ
ಭಾಗವತ ಭಾರತ ಪುರಾಣ ರಹಸ್ಯ ತತ್ವಗಳು ಅರುಪು ಕರುಣದಲಿ ||6||
ವೇದಪೀಠ ವಿರಿಂಚಿ ಭವ ಶುಕ್ರ ಆದಿಸುರ ವಿಜ್ಞಾನದಾಯಕ
ಮೋದ ಚಿನ್ಮಯ ಗಾತ್ರ ಲೋಕಪವಿತ್ರ ಸುಚರಿತ್ರ
ಛೇದ ಭೇದ ವಿಷಾದ ಕುಟಿಲಾಂತಾದಿ ಮಧ್ಯ ವಿದೂರ
ಆದಾನಾದಿ ಕಾರಣ ಬಾದರಾಯಣ ಪಾಹಿ ಸತ್ರಾಣ||7||
ಕ್ಷಿತಿಯೊಳಗೆ ಮಣಿಮಂತ ಮೊದಲಾದ ಅತಿ ದುರಾತ್ಮರು
ಒಂದಧಿಕ ವಿಂಶತಿ ಕುಭಾಷ್ಯವ ರಚಿಸೆ
ನಡುಮನೆಯೆಂಬ ಬ್ರಾಹ್ಮಣನ ಸತಿಯ ಜಠರದೊಳು ಅವತರಿಸಿ ಭಾರತೀರಮಣ
ಮಧ್ವಭಿದಾನದಿ ಚತುರದಶ ಲೋಕದಲಿ ಮೆರೆದ ಅಪ್ರತಿಮಗೆ ವಂದಿಸುವೆ||8||
ಪಂಚಭೇದಾತ್ಮಕ ಪ್ರಪಂಚಕೆ ಪಂಚರೂಪಾತ್ಮಕನೆ ದೈವಕ
ಪಂಚಮುಖ ಶಕ್ರಾದಿಗಳು ಕಿಂಕರರು ಶ್ರೀಹರಿಗೆ
ಪಂಚವಿಂಶತಿ ತತ್ವ ತರತಮ ಪಂಚಿಕೆಗಳನು ಪೇಳ್ದ
ಭಾವೀ ವಿರಿಂಚಿಯೆನಿಪ ಆನಂದತೀರ್ಥರ ನೆನೆವೆನನುದಿನವು||9||
ವಾಮದೇವ ವಿರಿಂಚಿತನಯ ಉಮಾಮನೋಹರ ಉಗ್ರ ಧೂರ್ಜಟಿ
ಸಾಮಜಾಜಿನ ವಸನಭೂಷಣ ಸುಮನಸೋತ್ತಂಸ ಕಾಮಹರ ಕೈಲಾಸ ಮಂದಿರ
ಸೋಮಸೂರ್ಯಾನಲ ವಿಲೋಚನ
ಕಾಮಿತಪ್ರದ ಕರುಣಿಸೆಮಗೆ ಸದಾ ಸುಮಂಗಲವ||10||
ಕೃತ್ತಿವಾಸನೆ ಹಿಂದೆ ನೀ ನಾಲ್ವತ್ತು ಕಲ್ಪಸಮೀರನಲಿ ಶಿಷ್ಯತ್ವವಹಿಸಿ
ಅಖಿಳ ಆಗಮಾರ್ಥಗಳೋದಿ ಜಲಧಿಯೊಳು ಹತ್ತು ಕಲ್ಪದಿ ತಪವಗೈದು
ಆದಿತ್ಯರೊಳಗೆ ಉತ್ತಮನೆನಿಸಿ
ಪುರುಷೋತ್ತಮನ ಪರಿಯಂಕ ಪದವೈದಿದೆಯೋ ಮಹದೇವ||11||
ಪಾಕಶಾಸನ ಮುಖ್ಯ ಸಕಲ ದಿವೌಕಸರಿಗೆ ಅಭಿನಮಿಪೆ
ಋಷಿಗಳಿಗೆ ಏಕಚಿತ್ತದಿ ಪಿತೃಗಳಿಗೆ ಗಂಧರ್ವ ಕ್ಷಿತಿಪರಿಗೆ
ಆ ಕಮಲನಾಭದಿ ಯತಿಗಳಾನೀಕಕಾನಮಿಸುವೆನು ಬಿಡದೆ
ರಮಾಕಳತ್ರನ ದಾಸವರ್ಗಕೆ ನಮಿಪೆನು ಅನವರತ||12||
ಪರಿಮಳವು ಸುಮನದೊಳಗೆ ಅನಲನು ಅರಣಿಯೊಳಗೆ ಇಪ್ಪಂತೆ
ದಾಮೋದರನು ಬ್ರಹ್ಮಾದಿಗಳ ಮನದಲಿ ತೋರಿತೋರದಲೆ ಇರುತಿಹ
ಜಗನ್ನಾಥ ವಿಠಲನ ಕರುಣ ಪಡೆವ ಮುಮುಕ್ಷುಜೀವರು
ಪರಮ ಭಾಗವತರನು ಕೊಂಡಾಡುವುದು ಪ್ರತಿದಿನವು||13||
||ಇತಿ ಶ್ರೀ ಮಂಗಳಾಚರಣ ಸಂಧಿ ಸಂಪೂರ್ಣಂ||
🙏🙏🙏
Namaste
Hearty Congratulations on receiving Rajyotsava Award.
We are very happy about it.
ಹರಿಕಥಾ ಮೃತ ಸಾರಹಾಡು ತುಂಬಾ ಚೆನ್ನಾಗಿದೆ
Sri Hari..Namo Namaha
Very beautiful
Thank you 🙏🏿🌄🙏🏿🙏🏿🙏🏿🙏🏿
Gurugalakaruneellarigulabisali.Hareasrinivasa
Very nice.
Very nice
Thankyou sir,🙏
Utube is best
😊
How to get all harikathamruthasara sandhi's mp3
SUPER
Super
@@chidambarwalvekar95 llj
E
👌👌👏👏🙏🙏
🙏🙏🚩🚩🌹
By